ಶನಿವಾರ, ಫೆಬ್ರವರಿ 26, 2011

ನನ್ನ ಹೆಡ್ಡಿಂಗು


ಇಂದಿನ "ಕನ್ನಡಪ್ರಭ" ಪತ್ರಿಕೆಯ ಎರಡನೇ ಪುಟದಲ್ಲಿ ರೈಲ್ವೆ ಬಜೆಟ್ ಕುರಿತಾಗಿ "ಓದುಗರ ಶೀರ್ಷಿಕೆ" ವಿಭಾಗದಲ್ಲಿ ನಾನು ಕೊಟ್ಟ ಹೆಡ್ ಲೈನ್. ಧನ್ಯವಾದ ಕನ್ನಡಪ್ರಭ. ವಿಶ್ವೇಶ್ವರ ಭಟ್ಟರು "ಕನ್ನಡ ಪ್ರಭ" ಸಾರಥ್ಯ ವಹಿಸಿದ ನಂತರ ಹೀಗೊಂದು ಹೊಸ ಪ್ರಯೋಗ ಪ್ರಾರಂಭಿಸಿದ್ದಾರೆ. ಸಾಮಾನ್ಯವಾಗಿ ನಾವು ಪತ್ರಿಕೆಗಳನ್ನು ಓದುವಾಗ ಅರೆ ಈ ಲೇಖನಕ್ಕೆ ಶೀರ್ಷಿಕೆ ಹೀಗಿದ್ದರೆ ಚೆನ್ನಿತ್ತು ಹಾಗಿದ್ದರೆ ಚೆನ್ನಿತ್ತು ಎಂದು ಅನ್ನಿಸುವುದು ಸಹಜ. ಹೀಗೆ ಓದುಗರ ಮನದಲ್ಲಿ ಮೂಡುವ ಶೀರ್ಷಿಕೆಗಳನ್ನು ಕ್ರೋಡೀಕರಿಸಿ ಅವುಗಳಲ್ಲಿ ಉತ್ತಮ ಶೀರ್ಷಿಕೆ ಆರಿಸಿ ಪತ್ರಿಕೆಯಲ್ಲಿ ಪ್ರಕಟಿಸುವ ಭಟ್ಟರ ಈ ಪ್ರಯತ್ನ ಪ್ರಶಂಸಾರ್ಹ.

ಗುರುವಾರ, ಫೆಬ್ರವರಿ 17, 2011

ಮಜ್ಜಿಗೆಯ ಮಹಾತ್ಮೆ


ಮಜ್ಜಿಗೆಯ ಮಹಾತ್ಮೆ ಬಲು ಚೆಂದ ಗೆಳೆಯ
ಚುರುಗುಡುವ ಬಿಸಿಲಲ್ಲಿ ಬಸವಳಿದು ಬಂದವಗೆ
ತಂಪಿನ ಇಂಪೆರೆಯುವ ಪರಮ ಪೇಯವಿದು
ದುಬಾರಿಯ ಕೋಲಾ-ಪೆಪ್ಸಿಗಳ ಎದುರು
ಹೋರಾಡುವ ಶಕ್ತಿಶಾಲಿ

ಇತಿಹಾಸದುದ್ದಕ್ಕೂ ಓದುವೆವು ನಾವು
ಬಿಳಿಯರ ದಬ್ಬಾಳಿಕೆಯ ವಿರುದ್ಧ
ಕರಿಯರ ಕ್ರಾಂತಿ
ಇಲ್ಲಿ ಎಲ್ಲವೂ ಅದಲು-ಬದಲು
ಕರಿಯರದೇ COLA-ಹಲವಿಲ್ಲಿ
ಗೆಲ್ಲಲಿ ಬೆಳ್ಳಗಿನ ತಂಪು ಮಜ್ಜಿಗೆ

ಸೋಮವಾರ, ಫೆಬ್ರವರಿ 14, 2011

ಪ್ರೇಮಾ ಗೀಮಾ ಜಾನೆದೋ


ಸಿಕ್ಕರೆ ಸ್ವರ್ಗ
ತಿಳಿದಿಲ್ಲ ನನಗೆ ಈ ದಿನದ ವಿಶೇಷ
ಪ್ರೇಮಿಗಳ ದಿನವಂತೆ ಇಂದು
ನನಗೆ ಲವ್ವಿನ ಬಗ್ಗೆ ಲವಲೇಶವೂ ಗೊತ್ತಿಲ್ಲ
ಆದರೂ ಹಾಕುತ್ತೇನೆ ಹಲವು ವೇಷ
ಇಂದಲ್ಲ ನಾಳೆ ನನ್ನವಳಾಗಬಹುದು
...ಅವಳು-ಬಿಲ್ ಗೇಟ್ಸ್ ನ ಮಗಳು

ಈ ದಿನ ಸುದಿನ
ಇಂದು " ಪ್ರೇಮಿಗಳ ದಿನ"
ಪ್ರಣಯ ಪಕ್ಷಿಗಳ ಪಾಲಿಗೆ
ಮರೆಯಲಾಗದ ದಿನ
ಹೃದಯಗಳ ಮಧುರ ಮಿಲನ
ಮುಂದುವರಿಯಲಿ ಪ್ರತಿದಿನ



ಹುಡುಕಾಟ
ಪ್ರೀತಿ ಎಂಬುದೊಂದು ಬೆರಗು
ಅನುಭವಿಸಿದಷ್ಟೂ ಹೆಚ್ಚುವುದಿದರ ಬೆಡಗು
ಹುಡುಗಾಟಕ್ಕೆ ಆರಂಭವಾಗಿ
ಹುಡುಕಾಟಕ್ಕೆ ತೊಡಗಿಸುವ ಈ ಪ್ರೀತಿ
ಬಿಡಿಸಲಾರದ ಒಗಟಿನ ರೀತಿ



ಗುರುವಾರ, ಫೆಬ್ರವರಿ 3, 2011

ಆಳರಸನ ಅಳುಕು


ದೊರೆಯೇ ನಿನಗೂ ಬಂದಿತೆ ದರವೇಶಿ ಸ್ಥಿತಿ
ಕಾಡುತಿಹುದೇ ತಲೆ ಉರುಳುವ ಭೀತಿ


ಅಲ್ಲಿ ದೂರದಲಿ ಪಿರಮಿಡ್ಡಿನೂರಿನಲಿ
ಭೋರ್ಗರೆದು ಭುಗಿಲೆದ್ದಿದೆ ಜನಸಾಗರ
ಇಲ್ಲಿ ನಮ್ಮೂರಿನಲ್ಲಿ ಆಳುವರಸನಿಗೆ ಏನೋ ಅಳುಕು
ದಿನಕೊಂದು ನಾಟಕ- ಹುಡುಕಿದರೆ ಬರೀ ಹುಳುಕು

ತಂತ್ರಗಳ ಹೆಣೆದು ವಿರೋಧಿಗಳನ್ನು ಹಣಿಯುವ
ತಾಂತ್ರಿಕನು ನೀನು
ಯಂತ್ರ-ತಂತ್ರ ಮಾಟ-ಮಂತ್ರಗಳ ಭಯವೇಕೆ ಇನ್ನು

ಇತ್ತ ದೊರೆಸಾನಿ (!?) ಕೊರಗುವಳು
ಎಲ್ಲಿಂದಲೋ ಬಂತೆನಗೆ ಬೆದರಿಕೆಯ ಕರೆ
ಅಶರೀರವಾಣಿ ಮಾಡಿತ್ತು ದೂರವಾಣಿ
ಎಷ್ಟು ಖರೆಯೋ ಎಷ್ಟು ಸರಿಯೋ ಬಲ್ಲವನೊಬ್ಬನೇ ದೊರೆ

ಆಳುವ ನಿಮಗೇ ಇರುವಾಗ ಇಷ್ಟೊಂದು ಅಳುಕು
ಇನ್ನೆಲ್ಲಿ ಹಸನಾಗುವುದು ಪ್ರಜೆಗಳಾ ಬದುಕು
ಇನ್ನೆಷ್ಟು ದಿನ ತಾನೇ ಸಹಿಸಿಯಾರು ಜನ
ದಂಗೆಯೇಳುವ ಮುನ್ನ ತಿದ್ದಿಕೊಂಡರೆ ಚೆನ್ನ