ಶನಿವಾರ, ಫೆಬ್ರವರಿ 26, 2011

ನನ್ನ ಹೆಡ್ಡಿಂಗು


ಇಂದಿನ "ಕನ್ನಡಪ್ರಭ" ಪತ್ರಿಕೆಯ ಎರಡನೇ ಪುಟದಲ್ಲಿ ರೈಲ್ವೆ ಬಜೆಟ್ ಕುರಿತಾಗಿ "ಓದುಗರ ಶೀರ್ಷಿಕೆ" ವಿಭಾಗದಲ್ಲಿ ನಾನು ಕೊಟ್ಟ ಹೆಡ್ ಲೈನ್. ಧನ್ಯವಾದ ಕನ್ನಡಪ್ರಭ. ವಿಶ್ವೇಶ್ವರ ಭಟ್ಟರು "ಕನ್ನಡ ಪ್ರಭ" ಸಾರಥ್ಯ ವಹಿಸಿದ ನಂತರ ಹೀಗೊಂದು ಹೊಸ ಪ್ರಯೋಗ ಪ್ರಾರಂಭಿಸಿದ್ದಾರೆ. ಸಾಮಾನ್ಯವಾಗಿ ನಾವು ಪತ್ರಿಕೆಗಳನ್ನು ಓದುವಾಗ ಅರೆ ಈ ಲೇಖನಕ್ಕೆ ಶೀರ್ಷಿಕೆ ಹೀಗಿದ್ದರೆ ಚೆನ್ನಿತ್ತು ಹಾಗಿದ್ದರೆ ಚೆನ್ನಿತ್ತು ಎಂದು ಅನ್ನಿಸುವುದು ಸಹಜ. ಹೀಗೆ ಓದುಗರ ಮನದಲ್ಲಿ ಮೂಡುವ ಶೀರ್ಷಿಕೆಗಳನ್ನು ಕ್ರೋಡೀಕರಿಸಿ ಅವುಗಳಲ್ಲಿ ಉತ್ತಮ ಶೀರ್ಷಿಕೆ ಆರಿಸಿ ಪತ್ರಿಕೆಯಲ್ಲಿ ಪ್ರಕಟಿಸುವ ಭಟ್ಟರ ಈ ಪ್ರಯತ್ನ ಪ್ರಶಂಸಾರ್ಹ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ